ಶ್ರೀನಗರ, ಮೇ. 10 (DaijiworldNews/AA): ಅಮೆರಿಕ ಮಧ್ಯಸ್ಥಿಕೆ ವಹಿಸಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮ ಘೋಷಿಸಿತ್ತು. ಆದರೆ ಇದೀಗ ಕದನ ವಿರಾಮ ಘೋಷಣೆಯಾದ ಮೂರೇ ಗಂಟೆಯಲ್ಲಿ ಮತ್ತೆ ಭಾರತದ ಮೇಲೆ ಪಾಕ್ ದಾಳಿ ನಡೆಸಿದೆ.

ಇಂದು ಸಂಜೆ 5 ಗಂಟೆಯಿಂದ ಕದನವಿರಾಮ ಘೋಷಿಸಲಾಗಿತ್ತು. ಆದರೆ, ಇಂದು ರಾತ್ರಿ 8.45ರ ಸುಮಾರಿಗೆ ಜಮ್ಮುವಿನ ಉದಂಪುರ ಮತ್ತು ಸಾಂಬಾದಲ್ಲಿ ಡ್ರೋನ್ ಹಾಗೂ ಶೆಲ್ ದಾಳಿ ನಡೆಸಲಾಗಿದೆ. ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ ಗಡಿಯಲ್ಲಿ ಹೊಸ ಡ್ರೋನ್ಗಳು ಪತ್ತೆಯಾಗಿದೆ. ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಹಾಗೂ ಶ್ರೀನಗರದಲ್ಲಿ ಸ್ಫೋಟಗಳ ಸದ್ದು ಕೇಳಿಬಂದಿದೆ.
ಜಮ್ಮುವಿನ ಅಖ್ನೂರ್ನಲ್ಲಿ ಸಂಜೆ 7:45ಕ್ಕೆ ಕದನ ವಿರಾಮ ಉಲ್ಲಂಘನೆಯಾಗಿದೆ. ಹಲವಾರು ಬಾರಿ ಜೋರಾಗಿ ಸ್ಫೋಟಗಳು ಕೇಳಿಬಂದವು. ಅಖ್ನೂರ್, ಕನಾಚಕ್, ಪರ್ಗ್ವಾಲ್ ಮತ್ತು ರಾಮನಗರ ವಲಯಗಳಲ್ಲಿ ಫಿರಂಗಿ ಶೆಲ್ ದಾಳಿ ವರದಿಯಾಗಿದೆ.
ಉಧಂಪುರದಲ್ಲಿ ಕತ್ತಲೆಯಾದಾಗ ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ತಡೆಹಿಡಿಯುತ್ತಿದ್ದಂತೆ ಕೆಂಪು ಗೆರೆಗಳು ಮತ್ತು ಸ್ಫೋಟಗಳು ಕೇಳಿಬರುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜೋರಾದ ಸ್ಫೋಟಗಳು ಕೇಳಿಬರುತ್ತಿವೆ. ರಾಜಸ್ಥಾನದ ಬಾರ್ಮರ್ ನಗರದಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ಪಂಜಾಬ್ನ ಫಿರೋಜ್ಪುರದಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ರಾಜಸ್ಥಾನದ ಜೈಸಲ್ಮೇರ್ನಲ್ಲಿ ಬ್ಲ್ಯಾಕ್ಔಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.