ನವದೆಹಲಿ, ಮೇ. 13 (DaijiworldNews/AK):ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿಯಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತೀಯ ವಾಯುಪಡೆ ಪಾಕಿಸ್ತಾನಿ ವಾಯುನೆಲೆಗಳನ್ನು ಅತ್ಯಂತ ಪರಿಣಾಮಕಾರಿ ಕ್ರಮದಿಂದ ನಿಷ್ಕ್ರಿಯಗೊಳಿಸಿವೆ. ಭಾರತೀಯ ಸಶಸ್ತ್ರ ಪಡೆಗಳ ಬಲದ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕದನ ವಿರಾಮಕ್ಕೆ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಕೈಗಾರಿಕಾ ಮಟ್ಟದಲ್ಲಿ ಭಯೋತ್ಪಾದನೆಯನ್ನು ಪೋಷಿಸಿದ ರಾಷ್ಟ್ರವು ಅದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸುವ ಮೂಲಕ ಪಾಕಿಸ್ತಾನ ತನ್ನನ್ನು ತಾನು ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದೆ. ಭಾರತ ನಾಶಪಡಿಸಿದ ಭಯೋತ್ಪಾದಕ ಮೂಲಸೌಕರ್ಯ ತಾಣಗಳು ಭಾರತೀಯರ ಸಾವಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಇತರ ಅನೇಕ ಅಮಾಯಕರ ಸಾವಿಗೆ ಕಾರಣವಾಗಿವೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಪೂರ್ತಿಯಾಗಿ ಹಿಂಪಡೆಯುವವರೆಗೂ ಭಾರತ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.