ಹುಬ್ಬಳ್ಳಿ, ಜೂ. 01 (DaijiworldNews/AA): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ. ಜೊತೆಗೆ ಮಂಡ್ಯದಲ್ಲೂ ಈ ಬಾರಿ ಮೊದಲ ಸೋಂಕು ಪತ್ತೆಯಾಗಿದೆ.

ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮಗುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್ ಸೋಂಕು ಇರೋದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.
ಇನ್ನೂ ಈ ವರ್ಷ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ 60 ವರ್ಷದ ವೃದ್ಧೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ. ಅವರು ಕಳೆದ 2 ದಿನಗಳಿಂದ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದು, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನಿಲ್ಲ ಹಿಂದೆ ಏನು ಸೂಚನೆ ಕೊಟ್ಟಿದ್ದೆವೊ ಅಷ್ಟೆ. ಸದ್ಯಕ್ಕೆ ವಿಶೆಷವಾಗಿ ಹೇಳುಂತದ್ದು ಏನೂ ಇಲ್ಲ. ಕೇಂದ್ರ ಸರ್ಕಾರ ಸಹ ಇದು ಅಪಾಯಕಾರಿ ಏನಲ್ಲ ಎಂದು ಸಂದೇಶ ನೀಡಿದೆ. ಸಣ್ಣ ಪ್ರಮಾಣದಲ್ಲಿ ತೊಂದರೆ ಆಗಬಹುದೇ ಹೊರತು ಅಪಾಯಕಾರಿ ಅಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ. ಹಾಗಾಗಿ ಜನ ಆತಂಕಪಡುವ ಅಗತ್ಯವಿಲ್ಲ. ರೋಗನಿರೋಧಕ ಶಕ್ತಿ ಕಡಿಮೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಬೇರೆ ಬೇರೆ ಕಾಯಿಲೆ ಇದ್ದಾಗ ಇದು ಸಮಸ್ಯೆ ಆಗಬಹುದು, ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಅಷ್ಟೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.