ಚಂಡೀಗಢ, ಜೂ. 03 (DaijiworldNews/AK): ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಸೈನಿಕರ ನಿಯೋಜನೆ ಮತ್ತು ಕಾರ್ಯತಂತ್ರದ ಬಗ್ಗೆ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಪಂಜಾಬ್ನ ತರಣ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತರಣ್ನ ಮೊಹಲ್ಲಾ ನಿವಾಸಿ ಗಗನ್ದೀಪ್ ಸಿಂಗ್ ಅಲಿಯಾಸ್ ಗಗನ್ ಬಂಧಿತ ಆರೋಪಿ. ಈತ ಪಾಕಿಸ್ತಾನ ಮೂಲದ ಖಲಿಸ್ತಾನ್ ಪರ ನಾಯಕ ಗೋಪಾಲ್ ಸಿಂಗ್ ಚಾವ್ಲಾ ಸಂಪರ್ಕದಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಆರೋಪಿ ಮಾಹಿತಿ ಹಂಚಿಕೊಂಡಿದ್ದ ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಗನ್ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಲು ಪಿಐಒಗಳ ಜೊತೆ ಹಣ ಹಾಕಿಸಿಕೊಂಡಿದ್ದಾನೆ. ಆತನ ಮೊಬೈಲ್ನಲ್ಲಿ 20ಕ್ಕೂ ಹೆಚ್ಚು ಐಎಸ್ಐ ಸಂಪರ್ಕಗಳ ವಿವರಗಳು ಪತ್ತೆಯಾಗಿವೆ.