ನವದೆಹಲಿ,ಜು. 21 (DaijiworldNews/AK): ಅನಾರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ಧನಕರ್ ಹೀಗೆ ಉಲ್ಲೇಖಿಸಿದ್ದಾರೆ
"ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ "ಅಚಲ ಬೆಂಬಲ" ಮತ್ತು ಅವರು ಹಂಚಿಕೊಂಡ "ಶಾಂತವಾದ, ಅದ್ಭುತವಾದ ಕೆಲಸದ ಸಂಬಂಧ" ಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ಧನಕರ್ ವ್ಯಕ್ತಪಡಿಸಿದರು.
"ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು, ಮತ್ತು ನನ್ನ ಅಧಿಕಾರದ ಅವಧಿಯಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ” ಏಮಧೂ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸತ್ ಸದಸ್ಯರು ತಮ್ಮ ಮೇಲೆ ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸವನ್ನು ಧನಕರ್ ಪ್ರೀತಿಯಿಂದ ಗುರುತಿಸಿದರು, ಆ ನೆನಪುಗಳನ್ನು "ಆಳವಾಗಿ ಪಾಲಿಸಲಾಗಿದೆ" ಎಂದು ಹೇಳಿದ್ದಾರೆ.