ರಾಯ್ಪುರ, ಆ. 18 (DaijiworldNews/AA): ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ಓರ್ವ ಪೊಲೀಸ್ ಜವಾನ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸಂಭವಿಸಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಮೀಸಲು ಪಡೆ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಆರ್ಜಿ ಪೊಲೀಸ್ ಜವಾನ್ ದಿನೇಶ್ ನಾಗ್ ಮೃತಪಟ್ಟಿದ್ದಾರೆ. ಜೊತೆಗೆ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಳೆದವಾರವೂ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟಗೊಂಡಿತ್ತು. ಪರಿಣಾಮ ಡಿಆರ್ಜಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು ಎಂದು ವರದಿಯಾಗಿದೆ.