ಪಾಟ್ನಾ, ಅ. 15 (DaijiworldNews/AA): "ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಾಗಿ, ಪಕ್ಷದ ಸಂಘಟನಾ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತೇನೆ ಎಂದು ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಆಗಿರುವ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.

"ನಾನು ಈ ಬಾರಿ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಇದು ಪಕ್ಷದ ನಿರ್ಧಾರ. ಪಕ್ಷದ ಬೃಹತ್ ಹಿತಾಸಕ್ತಿಗಾಗಿ ನಾನು ನನ್ನ ಸಂಘಟನಾ ಕಾರ್ಯವನ್ನು ಮುಂದುವರಿಸುತ್ತೇನೆ. ಜನ್ ಸುರಾಜ್ ಪಕ್ಷವು ೧೫೦ಕ್ಕೂ ಹೆಚ್ಚು ಸ್ಥಾನಗಳನ್ನ ಪಡೆದರೆ, ಅದು ಬಿಹಾರದ ಜನರ ನಿಜವಾದ ಗೆಲುವಾಗಲಿದೆ. 150ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಅದು ತಮಗೆ ವೈಯಕ್ತಿಕ ಸೋಲು" ಎಂದು ಹೇಳಿದ್ದಾರೆ.
"ಜನ್ ಸುರಾಜ್ ಅಧಿಕಾರಕ್ಕೆ ಬರಬಾರದೆಂದು ಪ್ರಾರ್ಥಿಸುತ್ತಿರುವ ನಾಯಕರು ಮತ್ತು ಅಧಿಕಾರಿಗಳಿಗೆ ಇದೊಂದು ಎಚ್ಚರಿಕೆ. ನಾವು ಸರ್ಕಾರ ರಚಿಸಿದರೆ ಅವರ 'ಕೆಟ್ಟ ದಿನಗಳು' ಆರಂಭವಾಗಲಿವೆ. ಇದು ಅವರಿಗೂ ಚೆನ್ನಾಗಿ ತಿಳಿದಿದೆ. ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ, ರಾಜ್ಯದ 100 ಅತ್ಯಂತ ಭ್ರಷ್ಟ ನಾಯಕರನ್ನ ಗುರುತಿಸಿ, ಅವರನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷೆ ನೀಡಲು ಹೊಸ ಕಾನೂನನ್ನು ಜಾರಿಗೆ ತರಲಾಗುವುದು" ಎಂದು ಭರವಸೆ ನೀಡಿದ್ದಾರೆ.
"ಇನ್ನೂ ಪ್ರಶಾಂತ್ ಕಿಶೋರ್ ಅವರ ನಿರ್ಧಾರವನ್ನ ಬಿಜೆಪಿ ಲೇವಡಿ ಮಾಡಿದೆ. ಚುನಾವಣೆಗೆ ನಿಂತರೇ ಅವರು ರೇವಣಿ ಕಳೆದುಕೊಳ್ಳುತ್ತಾರೆಂದು ಗೊತ್ತಿದೆ. ಹಾಗಾಗಿ ಹಿಂದೆ ಸರಿದಿದ್ದಾರೆ" ಎಂದಿದ್ದಾರೆ.