ಚಿಕ್ಕಮಗಳೂರು, ಡಿ. 02 (DaijiworldNews/TA): ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಾಗೂ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ನಗರ ಪ್ರವೇಶಿಸುತ್ತಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕಾರನ್ನು ಕೊಟ್ಟಿಗೆಹಾರದ ಬಳಿ ತಡೆದು ತಪಾಸಣೆ ನಡೆಸಲಾಗಿದೆ. ಪಿಎಸ್ಐ ರೇಣುಕಾ ನೇತೃತ್ವದಲ್ಲಿ ನಡೆದ ತಪಾಸಣೆಗೆ ಪ್ರತಾಪ್ ಸಿಂಹ ಸಹ ಸ್ಪಂದಿಸಿದ್ದಾರೆ.

ದತ್ತಜಯಂತಿ ಅಂಗವಾಗಿ ಜಿಲ್ಲೆಯಲ್ಲಿ 28 ಚೆಕ್ಪೋಸ್ಟ್ಗಳು ನಿರ್ಮಿಸಲಾಗಿದ್ದು, 6,000ಕ್ಕೂ ಅಧಿಕ ಪೊಲೀಸರು ಭದ್ರತೆಯನ್ನು ಕೈಗೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಮುನ್ನೆಚ್ಚರಿಕೆ ವಹಿಸಿದೆ.
ಡಿ.2ರಂದು ಅನುಸೂಯ ಜಯಂತಿ ನೆರವೇರಿದ್ದು, ಡಿ.3ರಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ 20-25 ಸಾವಿರ ಭಕ್ತರ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಡಿ.4ರಂದು ರಾಜ್ಯದ ಮೂಲೆ-ಮೂಲೆಗಳಿಂದ ಬರುವ 15,000ಕ್ಕೂ ಅಧಿಕ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.