ಬೆಂಗಳೂರು, ಫೆ. 17 (DaijiworldNews/AA): ಮುಂದಿನ ಬಾರಿ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ" ಎಂದರು.
ಸಿಎಂ ಬದಲಾವಣೆ ಕುರಿತ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, "ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ ಮಂಡಿಸ್ತಿದ್ದಾರೆ ಅಂದ್ರೆ ಅಷ್ಟು ಕಾನ್ಫಿಡೆನ್ಸ್ ಇದೆ ಅಂತಾಯ್ತಲ್ಲ. ಅಲ್ಲಿಗೆ ಯಥಾಸ್ಥಿತಿ ಅಂತಲೇ ಅರ್ಥ" ಎಂದು ಹೇಳಿದರು.