ನವದೆಹಲಿ, ಫೆ. 18 (DaijiworldNews/AK): ತೆಲುಗು ನಟಿ ಪ್ರತ್ಯುಷಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಗೆಳೆಯ ಗುಡಿಪಲ್ಲಿ ಸಿದ್ಧಾರ್ಥ ರೆಡ್ಡಿ ಎಂಬಾತನಿಗೆ ವಿಧಿಸಲಾದ ಶಿಕ್ಷೆಯನ್ನ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಆತ್ಮಹತ್ಯೆಗೆ ಪರಸ್ಪರ ಒಪ್ಪಿದ ಪ್ರಕರಣದಲ್ಲಿ ಬದುಕುಳಿದವರು ಶಿಕ್ಷಾರ್ಹರು ಎಂದು ಹೇಳಿದೆ. ಆ ಮೂಲಕ ರೆಡ್ಡಿ 4 ವಾರಗಳ ಒಳಗೆ ಶರಣಾಗುವಂತೆ ತಾಕೀತು ಮಾಡಿದೆ.
ಇದು ಆರೋಪಿ ಮತ್ತು ಮೃತ ವ್ಯಕ್ತಿಯ ನಡುವಿನ ಆತ್ಮಹತ್ಯೆ ಒಪ್ಪಂದ ಪ್ರಕರಣ ಎಂಬುದು ದಾಖಲೆಗಳು ಮತ್ತು ಸಾಕ್ಷ್ಯಗಳಿಂದ ಸ್ಪಷ್ಟವಾಗುತ್ತದೆ ಎಂದಿರುವ ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಆತ್ಮಹತ್ಯೆಗೆ ಇಬ್ಬರೂ ಪರಸ್ಪರ ಒಪ್ಪಿರುವುದರಿಂದ ಬದುಕುಳಿದವರ ಮೇಲೆ ಕಾಯಿದೆ ಚಲಾಯಿಸಲು ಈ ಒಪ್ಪಂದ ಪ್ರೇರಣೆ ನೀಡುತ್ತದೆ ಎಂದಿದೆ.
ಇಬ್ಬರೂ ಸಕ್ರಿಯವಾಗಿ ಭಾಗವಹಿಸದೇ ಹೋಗಿದ್ದರೆ ಈ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪೀಠ ತಿಳಿಸಿದೆ. ಹೀಗಾಗಿ ಒಪ್ಪಿ ಆತ್ಮಹತ್ಯೆಗೆ ಮುಂದಾಗುವುದನ್ನ ಪ್ರಚೋದನೆ ಎಂದು ಕಾನೂನು ಪರಿಗಣಿಸುತ್ತದೆ ಎಂದಿದೆ.