ಬೆಂಗಳೂರು, ಫೆ. 23 (DaijiworldNews/AA): ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ ಎಂದು ಗೃಹಸಚಿವ ಪರಮೇಶ್ವರ್ ಅವರು ಸಿಎಂ ಪರ ಬ್ಯಾಟ್ ಬೀಸಿದ್ದಾರೆ.

ಸಿಎಂ ಸಿದ್ದರಾಮಯ್ಯ - ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ನಿಲುವುಗಳನ್ನು ಸಮರ್ಥಿಸಿಕೊಂಡಿರುವ ಅವರು, "ಸಿದ್ದರಾಮಯ್ಯ ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು ಬಂದಿರೋದು. ಅದರಲ್ಲಿ ಹೊಸದೇನೂ ಇಲ್ಲ. ಅವರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ" ಎಂದು ಹೇಳಿದರು.
"ಸಿದ್ದರಾಮಯ್ಯ ಮೊದಲು ಜೆಡಿಎಸ್ನಲ್ಲಿದ್ರು, ಅಧ್ಯಕ್ಷರಾಗಿದ್ರು. ನಂತರ ಅವರನ್ನ ಪಕ್ಷದಿಂದ ಹೊರಗೆ ಹಾಕಿದ್ರು. ಏನೆಲ್ಲ ವಿಚಾರಗಳು ಇರ್ತವೋ ನಮಗೆ ತಿಳಿದಿರಲ್ಲ. ಅವರಿಬ್ಬರ ವಾಕ್ಸಮರ ಬಗ್ಗೆ ನಾನು ಉತ್ತರ ಕೊಡಕ್ಕಾಗಲ್ಲ" ಎಂದು ತಿಳಿಸಿದರು.
16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ವಿಚಾರವಾಗಿ ಮಾತನಾಡಿದ ಅವರು, "ಈ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳಿಗೆ ಮೊಬೈಲ್ ಕೊಟ್ರೆ ವಿದ್ಯಾಭ್ಯಾಸದ ಕಡೆ ಗಮನ ಕಡಿಮೆ ಆಗುತ್ತೆ. ಬಹಳ ದೇಶಗಳಲ್ಲಿ ಮೊಬೈಲ್ ಬ್ಯಾನ್ ನಿಯಮ ಇದೆ. ಆಸ್ಟ್ರೇಲಿಯಾ, ಯುರೋಪ್ನಲ್ಲಿ ಜಾರಿಯಲ್ಲಿದೆ. ನಾವೂ ಜಾರಿ ಮಾಡಲು ಚಿಂತನೆ ಮಾಡಿದ್ದೇವೆ, ಈಗಾಗಲೇ ಸಿಎಂ ಇದರ ಬಗ್ಗೆ ಮಾತಾಡಿದ್ದಾರೆ. ಸಾಧಕ ಬಾಧಕ ಅಧ್ಯಯನ ಮಾಡಿ ಕ್ರಮ ತಗೋತೇವೆ" ಎಂದರು