ಬೆಂಗಳೂರು, ಏ. 07 (DaijiworldNews/ AK): ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ತೈಲ ಬಿಸಿ ಹೆಚ್ಚಾಗುತ್ತಿದ್ದು, ಕರ್ನಾಟಕಕ್ಕೆ ಗ್ಯಾಸ್ ಸಂಕಷ್ಟ ಎದುರಾಗಿದೆ. ಈ ನಡುವೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಬಿಜೆಪಿ ವರ್ಸಸ್ ಕಾಂಗ್ರೆಸ್ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಗ್ಯಾಸ್ ಟ್ರಬಲ್ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಆರೋಪಿಸಿದೆ.

ಸೋಮವಾರ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾಸ್ ಬೆಲೆ ಗಗನಕ್ಕೇರಿದೆ. ಗ್ಯಾಸ್, ಪೆಟ್ರೊಲ್ ಸಿಗ್ತಿದ್ಯಾ ಈಗ? ನರೇಂದ್ರ ಮೋದಿ ಈ ಅವಾಂತರಕ್ಕೆ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇನ್ನು ಅತ್ತ ಯುದ್ಧದ ಸಂಕಷ್ಟದಲ್ಲಿ ಒಗ್ಗಟ್ಟಾಗಿ ಇರೋಣ ಎಂದು ಪ್ರಧಾನಿ ಕರೆ ನೀಡಿದರು. ಅಲ್ಲದೇ ಕಳೆದ ವಾರ ಪ್ರಧಾನಿ ಮೋದಿ ಕರೆದಿದ್ದ ತುರ್ತು ಸಭೆಯಲ್ಲೂ ಮುನಿಯಪ್ಪ ಹಾಜರಾಗಿದ್ದರು. ಆಗ ಚಕಾರ ಎತ್ತದೇ ಈಗ ರಾಜ್ಯ ಸರ್ಕಾರದಿಂದ ಗಂಭೀರ ಆರೋಪದ ಬಗ್ಗೆ ಬಿಜೆಪಿ ಕಿಡಿಕಾರಿದೆ.