ಬೆಂಗಳೂರು,ಮಾ.16(AZM):ಮಾಧ್ಯಮಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸದೆ ವರದಿ ಮಾಡಬೇಕು. ಹಾಗೂ ಸುಳ್ಳು ಸುದ್ದಿ ಮತ್ತು ಪಾವತಿ ಸುದ್ದಿಯ ಕುರಿತು ಎಚ್ಚರವಹಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ತಿಳಿಸಿದ್ದಾರೆ.
![](https://daijiworld.ap-south-1.linodeobjects.com/iWeb/tvdaijiworld/img_tv247/azm_160319_sanjeev.jpg)
ಲೋಕಸಭಾ ಚುನಾವಣೆಯ ಹಿನ್ನೆಲೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಈ ಕುರಿತು ಅವರು ಮಾತನಾಡಿದರು. ವಿದ್ಯುನ್ಮಾನ ಮಾಧ್ಯಮಗಳು ರಾಜಕೀಯ ಪಕ್ಷಗಳ ಜಾಹೀರಾತು ಬಿತ್ತರಿಸುವ ಮುನ್ನಾ ಚುನಾವಣಾ ಆಯೋಗದ ಅನುಮತಿ ಪತ್ರ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ಸಂಧರ್ಭದಲ್ಲಿ ಅವರು ತಿಳಿಸಿದರು.