ಲಕ್ನೋ, ಮೇ. 25 (DaijiworldNews/AK): ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬಳಿಕ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಶಫೋರರ್ಥಶ ಪತ್ನಿ ಅನುಷ್ಕಾ ಶರ್ಮಾ ಟೆಂಪಲ್ ರನ್ ಶುರು ಮಾಡಿದೆ. ಇತ್ತೀಚೆಗೆ ವೃಂದಾವನದಲ್ಲಿ ಪ್ರೇಮಾನಂದ ಮಹಾರಾಜ್ ಅವರನ್ನ ಭೇಟಿಯಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇಂದು ಅಯೋಧ್ಯೆಗೆ ಭೇಟಿ ನೀಡಿದ.

ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದೆ. ಈ ವೇಳೆ ಅರ್ಚಕರು ದಂಪತಿಗೆ ದೇವರ ಹಾರ ಹಾಕಿದರು. ಜೊತೆಗೆ ಅನುಷ್ಕಾ ಶರ್ಮಾ ಹಣೆಗೆ ತಿಲಕ ಇಟ್ಟರು. ಸ್ಟಾರ್ ಜೋಡಿಗೆ ದೇವಸ್ಥಾನಕ್ಕೆ ಆಗಮಿಸಿದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದೇವಾಲಯ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ದಾಸ್ ಜಿ ಮಹಾರಾಜ್ ಮಹಂತ್, 'ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರಿಗೆ ಆಧ್ಯಾತ್ಮಿಕತೆ, ಸಂಸ್ಕೃತಿ, ದೇವರು ಮತ್ತು ಸನಾತನ ಧರ್ಮದ ಬಗ್ಗೆ ಆಳವಾದ ಪ್ರೀತಿ ಇದೆ ಎಂದು.