ನವದೆಹಲಿ, ಜೂ 01 (DaijiworldNews/SM): ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವು ಬುಧವಾರದಿಂದ ಶುರುವಾಗಲಿದೆ. ಓವಲ್ ಮೈದಾನದಲ್ಲಿ ಗೆಲ್ಲುವ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ. ಫೈನಲ್ ಪಂದ್ಯ ಗೆಲ್ಲುವುದೇ ನಾಯಕ ರೋಹಿತ್ ಮುಂದಿರುವ ದೊಡ್ಡ ಸವಾಲು. ನಾಯಕ ರೋಹಿತ್ ಶರ್ಮಾಗೆ ಈ ಗೆಲುವು ಅನಿವಾರ್ಯವಾಗಿದೆ.
![](https://daijiworld.ap-south-1.linodeobjects.com/Linode/img_tv247/SANTU-16423.rohith.jpg)
2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.
ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.
ಆದರೆ ಹಿಟ್ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.
ಆದರೆ ಹಿಟ್ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.
ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.
ಈಗಾಗಲೇ ಟಿ20 ವಿಶ್ವಕಪ್ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.