ಚೆನ್ನೈ, ಆ. 12 (DaijiworldNews/AA): 'ಭಾಷಾ ಸಿನಿಮಾಗಿಂತ ಉಪೇಂದ್ರ ನಿರ್ದೇಶಿಸಿದ್ದ ಓಂ ಸಿನಿಮಾ ಹತ್ತು ಪಟ್ಟು ಉತ್ತಮ' ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹಾಡಿ ಹೊಗಳಿದ್ದಾರೆ.

ಚೆನ್ನೈನಲ್ಲಿ ನಡೆದ ಕೂಲಿ ಸಿನಿಮಾ ಪ್ರಿರಿಲೀಸ್ ಇವೆಂಟ್ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರನ್ನ ಕೊಂಡಾಡಿದ್ದಾರೆ. "ಭಾರತದಲ್ಲಿರುವ ಮೋಸ್ಟ್ ಇಂಟಲೆಕ್ಚುವಲ್ ಡೈರೆಕ್ಟರ್ಗಳಿಗೆ ಇನ್ಸಿರೇಷನ್ ಅಂದ್ರೆ ಅದು ಉಪೇಂದ್ರ, ಕನ್ನಡ ಚಿತ್ರರಂಗ ಅಷ್ಟೇ ಅಲ್ಲ ಹಿಂದಿ, ತೆಲುಗು ಮಲಯಾಳಂ, ತಮಿಳು ಎಲ್ಲರೂ ಉಪೇಂದ್ರರಿಂದ ಸಾಕಷ್ಟು ಕಲಿತಿದ್ದಾರೆ. ಉಪೇಂದ್ರ ನಟರಾಗಿ ಅಲ್ಲ ನಿರ್ದೇಶಕರಾಗಿ ಚಿತ್ರರಂಗಕ್ಕೆ ಬಂದವರು, ಕನ್ನಡದಲ್ಲಿ ಶಿವರಾಜ್ಕುಮಾರ್ ಆಕ್ಟ್ ಮಾಡಿದ್ದ ಓಂ ಸಿನಿಮಾವನ್ನ ಅವರೇ ನಿರ್ದೇಶನ ಮಾಡಿದ್ರು , ಈ ಸಿನಿಮಾ ಭಾಷಾ ಚಿತ್ರಕ್ಕಿಂತ ಹತ್ತುಪಟ್ಟು ಬೆಟರ್ ಸಿನಿಮಾ, ನನಗೆ ಆಕ್ಟರ್ ಉಪೇಂದ್ರಗಿಂತ ಡೈರೆಕ್ಟರ್ ಉಪೇಂದ್ರ ಇಷ್ಟ. ಈಗ ಲೋಕೇಶ್ ಕನಕರಾಜ್ ನಾನ್ಲೀನಿಯರ್ ಸಿನಿಮಾ ಮಾಡ್ತಿದ್ದಾರೆ, ನಾನ್ಲೀನಿಯರ್ ಸಿನಿಮಾಗಳನ್ನ ಆಗಲೇ ಮಾಡುತ್ತಿದ್ದವರು ಡೈರೆಕ್ಟರ್ ಉಪೆಂದ್ರ" ಎಂದಿದ್ದಾರೆ.
ಕೂಲಿ ಚಿತ್ರದಲ್ಲಿ ಉಪೇಂದ್ರ ಅವರು ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರಿರಿಲೀಸ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದ ಉಪೇಂದ್ರ ಕುರಿತು ರಜನಿಕಾಂಕ್ ಹೊಗಳಿಕೆಯ ಮಾತನ್ನಾಡಿದ್ದಾರೆ. ಇನ್ನು ರಜನಿಕಾಂತ್ ಉಪ್ಪಿ ಗುಣಗಾನ ಮಾಡಿರುವ ಮಾತುಗಳನ್ನ ಕೇಳಿ ಕನ್ನಡಿಗರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.