ವಿಟ್ಲ, ಡಿ.29(DaijiworldNews/AA): ಬೈಕಿಗೆ ಈಚರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ವಿಟ್ಲದ ಮಾಣಿ ಬಳಿಯ ಗಡಿಯಾರ ಎಂಬಲ್ಲಿ ಡಿ. 28ರಂದು ನಡೆದಿದೆ.

ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಎಂದು ಗುರುತಿಸಲಾಗಿದೆ.
ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಪರಿಣಾಮ ಬೈಕಿನಲ್ಲಿದ್ದ ಶಾಝಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಗಾಯಗೊಂಡ ಅಬ್ದುಲ್ ಸಲೀಂ, ಅವರ ಪತ್ನಿ ಹಾಗೂ ಇನ್ನಿಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ.