ಬಂಟ್ವಾಳ,ಜ.06 (DaijiworldNews/AK): ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇದರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ಸಜಿಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು, ಸಂಯಮ, ಶ್ರದ್ಧೆ, ವಿನಯ ತಾಳ್ಮೆಯಿಂದ ವಿದ್ಯೆ ಕಲಿತು ಹೆತ್ತವರಿಗೆ ಹಾಗೂ ಕಲಿತ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರುವಂತೆ ಹಿತವಚನ ನೀಡಿದರು.
ಕಾಲೇಜು ಪ್ರಾಚಾರ್ಯ ಸುರೇಶ್ ಬಿ. ಐತಾಳ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ಸುರೇಶ್ ಶೆಟ್ಟಿ ಕೊಯಮಜಲು ಉಪಸ್ಥಿತರಿದ್ದರು.
ಉಪನ್ಯಾಸಕಕರಾದ ಬಾಲಕೃಷ್ಣ ನಾಯ್ಕ್ ಕೆ. ಬೆಳ್ಳಾರೆ ವರದಿ ವಾಚಿಸಿದರು, ಬಾಲಕೃಷ್ಣ ಎನ್.ವಿ. ಸನ್ಮಾನ ಪತ್ರ ವಾಚಿಸಿ, ವಂದಿಸಿದರು. ಶೋಭಾ ಕೆ., ಸ್ಪೂರ್ತಿ ಬಹುಮಾನಿತರ ಪಟ್ಟಿ ವಾಚಿಸಿದರು. ಗಾಯತ್ರಿ., ಭಾರತಿ, ಯಶೋಧ, ಸಿಂಧುಜ, ಸುಂದರಿ, ಸಿಬ್ಬಂದಿಗಳಾದ ಲತಾ, ಸಂಜೀವ ಪೂಜಾರಿ ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.