ಬಂಟ್ವಾಳ,ಮಾ.9(DaijiworldNews/TA): ಮನೆಯಿಂದ ಹೋಗುವಾಗ ದಿಗಂತ್ 500 ರೂ ತೆಗೆದುಕೊಂಡು ಹೋಗಿದ್ದಾನೆ. ಆ ಬಳಿಕ ಕೆಲವು ಕಡೆ ಟಿಕೆಟ್ ಕೊಡದೆ ಪ್ರಯಾಣ ಮಾಡಿದ್ದಾನೆ ಎಂದು ದ.ಕ.ಜಿಲ್ಲಾ ಎಸ್ ಪಿ ಯತೀಶ್ ಎನ್. ತಿಳಿಸಿದ್ದಾರೆ.

ಅವನ ಪಾದದಲ್ಲಿ ಗಾಯವಾಗಿದ್ದು, ಅದೇ ರಕ್ತ ಚಪ್ಪಲಿಯಲ್ಲಿ ಅಂಟಿಕೊಂಡಿದೆ ಎಂದು ಸ್ವತಹ ದಿಗಂತ್ ಹೇಳಿದ್ದಾನೆ. ಅವನನ್ನು ಯಾರೂ ಎತ್ತಿಕೊಂಡು ಹೋಗಿರಲಿಲ್ಲ. ಅವನೇ ಹೋಗಿದ್ದ. ಅವನ ಇಡೀ ಪ್ರಯಾಣದಲ್ಲಿ ಅವನು ಯಾರನ್ನೂ ಸಂಪರ್ಕ ಮಾಡಿಲ್ಲ. ಕಲಿಯುವುದರಲ್ಲಿ ಅವನು ಹುಷಾರಿದ್ದ, ಕೆಲ ದಿನಗಳಿಂದ ಸ್ವಲ್ಪ ಮಂಕಾಗಿದ್ದ.
ಸದ್ಯ ಹೈಕೋರ್ಟ್ ಹೇಬಿಯಸ್ ಕಾರ್ಪಸ್ ದಾಖಲಾಗಿರುವ ಕಾರಣ ಬುಧವಾರ ಹೈಕೋರ್ಟ್ ಹಾಜರುಪಡಿಸಿ ಕೋರ್ಟ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಅವನನ್ನು ಬೊಂದೇಲ್ ನ ಬಾಲ ಮಂದಿರದಲ್ಲಿ ಇರಿಸಲಾಗಿದೆ ಎಂದು ಎಸ್ ಪಿ ಯತೀಶ್ ಎನ್ ಮಾಹಿತಿ ನೀಡಿದರು.