ಕಾಸರಗೋಡು, ಮೇ. 12 (DaijiworldNews/AK): ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ವೇಳೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದ ಘಟನೆ ಇಂದು ಬೆಳಗ್ಗೆ ಚೆರ್ವತ್ತೂರು ಎಂಬಲ್ಲಿ ನಡೆದಿದೆ.



ಘಟನೆಯಲ್ಲಿ ಮಣ್ಣಿನಡಿಯಲ್ಲಿ ನಾಲ್ವರು ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹರಸಾಹಸ ಪಟ್ಟು ನಾಲ್ವರನ್ನು ಹೊರತೆಗೆದಿದ್ದಾರೆ. ಈ ಪೈಕಿ ಓರ್ವ ಮೃತಪಟ್ಟಿದ್ದಾರೆ. ಎಲ್ಲ ಕಾರ್ಮಿಕರು ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದೆ.
ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ರಸ್ತೆ ಬದಿಯ ಗುಡ್ಡವು ಕುಸಿದು ಬಿದ್ದಿದೆ. ಇದರಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಗಾಯಗೊಂಡ ಕಾರ್ಮಿಕರನ್ನು ಚೆರ್ವತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.