ಮಂಗಳೂರು , ಜೂ. 21 (DaijiworldNews/AK): ದ.ಕ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಯೋಗ ವಿದ್ ಯೋಧ ಎಂಬ ಅಂತರಾಷ್ಟ್ರೀಯ ಯೋಗ ದಿನ ಇಂದು ಸೋಮೇಶ್ವರ ದೇವಾಲಯದಲ್ಲಿ ನಡೆಯಿತು.



ಬಳಿಕ ಮಾತನಾಡಿದ ಸಂಸದ, ಸೋಮನಾಥನ ಆಶಿರ್ವಾದದಿಂದ ಯೋಗ ಕೂಡಿ ಬಂದರೆ ಎಲ್ಲವೂ ಸಫಲವಾಗುತ್ತದೆ,ನಾವು ಮಾಡುವ ಪ್ರಯತ್ನ ಮುಖ್ಯವಾಗಿ ದೆ. ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ಯೋಗವನ್ನು ಜಗದಗಲಕ್ಕೆ ಕೊಂಡೊಯ್ಯಿದಕ್ಕೆ ಅಭಿನಂದೊಸಿದರು.ಈ ದಿನ ಒಂದು ದಿನಕ್ಕೆ ಸಿಮಿತವಾಗದೆ ನಮ್ಮ ತುಳುನಾಡನ್ನು ಜಗತ್ತಿದೆ ಪರಿಚಯಮಾಡಿಕೊಡುತಾಗಲಿ ಎಂದರು.
ನಮ್ಮೆಲರ ಆರಾಧ್ಯ ಮೂರ್ತಿ ಸೋಮೇಶ್ವರನ ಆಶೀರ್ವಾದವನ್ನು ಬೇಡುತ್ತ ಯೋಗ ವಿಥ್ ಯೋಧ ಎಂಬ ಕಾರ್ಯಕ್ರಮವನ್ನು ಕಳೆದ ಬಾರಿ ಪ್ರಾರಂಭಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಈ ರಾಜ್ಯದ ಅಥವಾ ದೇಶದ ಎಲ್ಲ ಆಯಾಮಗಳಿಂದ ನಂಬರ್ 1 ಆಗುವಂತಹ ಯೋಗ್ಯತೆವಿದೆ ಆ ಯೋಗ್ಯತೆಗೆ ಯೋಗ ಕೂಡಿ ಬರಬೇಕಾದರೆ ಜನರು ಮನಸು ಮಾಡಬೇಕು ನಮ್ಮೆಲರ ಸಂಕಲ್ಪ ಶಕ್ತಿ ಸರಕಾರಕ್ಕೆ ಸರಕಾರೇತರ ಸಂಸ್ಥೆಗಳಿಗೆ ತಲುಪಬೇಕು ಆಗ ಮಾತ್ರ ಕರಾವಳಿ ಕರ್ನಾಟಕ .ತುಳುನಾಡು ಇದು ಒಂದು ಸಾಧ್ಯತೆಗಳ ಸಾಗರ ಎಂದು ನಂಬಿದ್ದು ಸಾಧ್ಯತೆಗನ್ನು ಸಹಕಾರಗೊಳಿಸಲು ಎಲ್ಲರ ಸಂಕಲ್ಪ ಶಕ್ತಿ ಅಗತ್ಯವಿದ್ದು ಭಗವಂತನ ಆಶೀರ್ವಾದದ ಅಗತ್ಯವಿದೆ ಎಂದರು.
ಆ ಕಾರಣಗಳಿಂದ ಯೋಗ ವಿಥ್ ಯೋಧ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದು ಕರಾವಳಿ ಭಾಗದ ಪ್ರವತ್ಸೋದ್ಯಮ ಕ್ಷೇತ್ರಗಳಲ್ಲಿ ಮಾಡಬೇಕೆಂಬ ಯೋಚನೆಯಿದ್ದು ಕಳೆದ ಬಾರಿ ಸಸಿಹಿತ್ಲು ವಿನಲ್ಲಿ ನಡೆಸಿದ್ದೇವೆಂದು ಹೇಳಿದರು.