ಕಾಸರಗೋಡು, ಜೂ. 23 (DaijiworldNews/TA): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಬಾಂಜ ತ್ತಡ್ಕ ಇಕ್ಕೇರಿ ಎಂಬಲ್ಲಿ ನಡೆದಿದೆ.

ಬಾಂಜತ್ತಡ್ಕ ಇಕ್ಕೇರಿಯ ವಿ.ವಿ.ಪ್ರಕಾಶ್ (40) ಮೃತಪಟ್ಟವರು. ತೆಂಗಿನಕಾಯಿ ಕೊಯ್ಯುವ ಕಾಯಕ ಮಾಡಿಕೊಂಡಿದ್ದ ಪ್ರಕಾಶ್ ಜೂನ್ 18 ರಂದು ಮಧ್ಯಾಹ್ನ ದಿಂದ ನಾಪತ್ತೆ ಯಾಗಿದ್ದರು. ಈ ಬಗ್ಗೆ ಪತ್ನಿ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
ರವಿವಾರ ಇಕ್ಕೇರಿ ಸಮೀಪ ಹೊಳೆಯ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.