ಮಂಗಳೂರು, ,ಜು. 02 (DaijiworldNews/AK): ಮಂಗಳೂರಿನ ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ನಗರದ ನವಭಾರತ್ ವೃತ್ತದ ಬಳಿ ಬೃಹತ್ ಮರವೊಂದು ಧರೆಗುರುಳಿದೆ.


ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಿ ಪ್ರದೇಶದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಿದರು.
ಹಠಾತ್ ಮಳೆ ಮತ್ತು ಬಿರುಗಾಳಿಯಿಂದಾಗಿ ನಗರದ ಹಲವಾರು ಭಾಗಗಳಲ್ಲಿ ಸಂಚಾರ ಅಸ್ತವ್ಯಸ್ತತೆ ಮತ್ತು ಕೆಲವು ಕಡೆ ನುಗ್ಗಿದ ಸ್ಥಿತಿ ನಿರ್ಮಾಣವಾಗಿದೆ.