ಬೆಳ್ತಂಗಡಿ, ಆ. 12 (DaijiworldNews/AK): ಆಗಸ್ಟ್ 6ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಅದೇ ದಿನ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆಯೂ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿದ್ದಾರೆ ಎಂದು ಜಯಂತ್ ಟಿ ರವರು ಆಗಸ್ಟ್ 11ರಂದು ಧರ್ಮಸ್ಥಳ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.