ಸುಳ್ಯ, ಆ. 17 (DaijiworldNews/AA): ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿದ್ದಾರೆ.

ಆರೋಪಿಯ ಉನ್ಮೇಶ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ ಕಳವು ಪ್ರಕರಣ ದಾಖಲಾಗಿರುತ್ತದೆ. ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ಆಗಸ್ಟ್ 17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.