ಪುತ್ತೂರು, ಫೆ. 21 (DaijiworldNews/TA): ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ.

ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು ಬೆಂಕಿಗೆ ಆಹುತಿಯಾಗಿದೆ.ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪು, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ ನಂದಿಸಲು ಸ್ಥಳೀಯರು ಶ್ರಮಿಸಿದರು.