ಮಂಗಳೂರು, ಮೇ. 24 (DaijiworldNews/AK): ದ್ವಿಚಕ್ರ ವಾಹನ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗೆ ಗಾಯಗೊಂಡ ಘಟನೆ ಮುಕ್ಕ ಬಳಿ ಸಂಭವಿಸಿದೆ.


ಈ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ಭೀಮಾ ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ವ್ಯಕ್ತಿಯ ಮೃತದೇಹವನ್ನು ತ್ವರಿತವಾಗಿ ಸ್ಥಳಾಂತರಿಸುವಲ್ಲಿ ಪೊಲೀಸ್ ಅಧಿಕಾರಿ ಕೃಷ್ಣ ಸಹಕರಿಸಿದರು.
ವರದಿಗಳ ಪ್ರಕಾರ, ಪೊಲೀಸ್ ಅಧಿಕಾರಿ ಕೃಷ್ಣಅವರು ತಕ್ಷಣವೇ ಸ್ಥಳಕ್ಕೆ ಅಗಮಿಸಿ ಮೃತದೇಹವನ್ನು ಆಂಬ್ಯುಲೆನ್ಸ್ಗೆ ಸಾಗಿಸಲು ವ್ಯವಸ್ಥೆ ಮಾಡಿದರು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.