ಮಂಗಳೂರು,ಸೆ.02: ಸೆ.೭ರಂದು ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚವು ನಡೆಸಲು ಉದ್ದೇಶಿಸಿರುವ ಬೈಕ್ ರ್ಯಾಲಿಯಿಂದ ಮತ್ತೆ ಶಾಂತಿ ಕದಡುತ್ತದೆ.ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಅನುಮತಿಯನ್ನು ನೀಡಬಾರದು ಎಂದು ಎಸ್ಡಿಪಿಐ ಒತ್ತಾಯಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಎಸ್ ಡಿಪಿಐನ ಮುಖಂಡ ಹನೀಫ್ ಖಾನ್ ಕೊಡಾಜೆ, ಜಿಲ್ಲೆಯಲ್ಲಿ ಈ ಹಿಂದೆ ಸಂಘಪರಿವಾರದಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗಿತ್ತು..ಇದನ್ನ ಹತೋಟಿಗೆ ತರಲು ಪೋಲಿಸರು ವಿಫಲರಾಗಿದ್ದರು. ಜೊತೆಗೆ ಜಿಲ್ಲೆಯಲ್ಲಿ ಕೋಮು ಗಲಭೆಗಳ ಮೂಲಕ ಜನಪ್ರತಿನಿಧಿಗಳು ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರ ಬಹಳಷ್ಥು ರಕ್ತಾಪಾತ ನಡೆಸಿದೆ. ಕೇವಲ ಮುಸಲ್ಮಾನರು ಮಾತ್ರವಲ್ಲದೆ ಇತರ ಧರ್ಮೀಯರನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಹತ್ಯೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದರು. ಅಲ್ಲದೆ ಜಿಲ್ಲೆಯ ಜನರು ಹಲವು ತಿಂಗಳ ನಿಷೇಧಾಜ್ಞೆಯಿಂದ ಬೇಸತ್ತಿದ್ದಾರೆ ಮತ್ತೆ ಅಂತಹ ಪರಿಸ್ಥಿತಿ ಎದುರಿಸಲು ಸಿದ್ದರಿಲ್ಲ. ಇದನ್ನು ಜಿಲ್ಲಾಡಳಿತ ಮತ್ತು ಪೋಲಿಸಲು ಮನಗಂಡು ಸೂಕ್ತ ಕ್ರಮವನ್ನು ಕೈಗೊಳ್ಳಬೇಕೇಂದು ಆಗ್ರಹಿಸಿದ್ದಾರೆ.
![](https://daijiworld.ap-south-1.linodeobjects.com/iWeb/tvdaijiworld/img_tv247/02092017 PRESS.jpg)