ಉಳ್ಳಾಲ,ಸೆ.03: ಏಕಾಏಕಿ ಮನೆಗೆ ನುಗ್ಗಿದ ೧೫ ಜನರ ತಂಡ ಮನೆಯವರ ಮೇಲೆ ಹಲ್ಲೆ ನಡೆಸಿ, ಸೊತ್ತುಗಳಿಗೆ ಹಾನಿ ಮಾಡಿದ ಘಟನೆ ಉಳ್ಳಾಲದ ದರ್ಗಾ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು ೧೧.೩೦ಕ್ಕೆ ದಾಳಿ ಮಾಡಿ ಮನೆ ಮಾಲಿಕ ಖಾಸಿಂ, ಪತ್ನಿ ಮೈಮುನಾ, ಮಕ್ಕಳಾದ ಸೋಯಲ್, ಅಮಿನ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಖಾಸಿಂ ಪುತ್ರ ಹಂಝ ಎಂಬವರನ್ನು ಹುಡುಕಿಕೊಂಡು ಬಂದಿದ್ದು, ಈ ವೇಳೆ ಹಂಝ ಮನೆಯಲ್ಲಿ ಇಲ್ಲದ ಕಾರಣ ಮನೆಮಂದಿ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮನೆಯವರು ಪ್ರಶ್ನಿಸಿದ್ದಕ್ಕೆ ಹಂಝನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ. ದುಷ್ಕರ್ಮಿಗಳು ಮನೆಯಲ್ಲಿದ್ದ ಸೊತ್ತುಗಳನ್ನು ಹಾನಿ ಮಾಡಿರುವುದಲ್ಲದೇ, ಮನೆಯ ಕಿಟಕಿ, ಗಾಜುಗಳನ್ನು ಪುಡಿಗೈದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲ ದಿನಗಳ ಹಿಂದೆ ಹಂಝ ದುಷ್ಕರ್ಮಿಗಳೊಂದಿಗೆ ಜಗಳವಾಡಿದ್ದು ಈ ಕಾರಣದಿಂದ ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಘಟನೆ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://daijiworld.ap-south-1.linodeobjects.com/iWeb/tvdaijiworld/img_tv247/03092017mange nuggi02.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/03092017mangenuggi hale03.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/0302017mangenuggil04.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/03092017mange nuggi05.jpg)