ಮಂಗಳೂರು, ಜು.12 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವ್ಯಕ್ತಿ ಕೂರೊನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಗಳೂರಿನ ಬಂದರು ನಿವಾಸಿ 68 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.
ನಾಲ್ವರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮತ್ತೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 46 ಕ್ಕೇರಿಕೆಯಾಗಿದೆ.