ಮಂಗಳೂರು, ಜು 15 (Daijiworld News/MSP): ಜಿಲ್ಲೆಯಲ್ಲಿ ಕೊವೀಡ್ ನಿಯಂತ್ರಣಕ್ಕೆ ಶ್ರಮಿಸಿ ಸ್ವತಃ ಸೋಂಕುಪೀಡಿತರಾಗಿದ್ದ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಜುಲೈ 2 ರಂದು ಕೊರೊನಾ ಸೋಂಕಿತರಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಸಂದರ್ಭದಲ್ಲಿ ಎರಡು ಬಾರಿ ಅವರ ಸ್ವ್ಯಾಬ್ ಟೆಸ್ಟ್ ಮಾಡಿದ ಸಂದರ್ಭದಲ್ಲಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.