ಸುಳ್ಯ, ಜು 19 (DaijiworldNews/PY): ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ವೈದ್ಯರುಗಳಾದ ಡಾ.ವಾನನ್ಸ್, ಡಾ.ದೇವರಾಮನ್, ಡಾ.ಪ್ರೇಮ್ ಕುಮಾರ್, ಡಾ.ಪ್ರಬೀನ್ ಜಾರ್ಜ್ ಹಾಗೂ ಡಾ.ಶೃತಿ.ಸಿ ಎನ್ನುವವರ ವಿರುದ್ದ ಜಿಲ್ಲಾಡಳಿತದ ಆದೇಶದಂತೆ ಪ್ರಕರಣ ದಾಖಲಿಸಲಾಗಿದೆ.
ಕೆವಿಜಿ ವೈದ್ಯಕೀಯ ಕಾಲೇಜಿನ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದ ಕಾರಣ ಅವರನ್ನು 14ದಿನಗಳ ಕಾಲ ಹೋಂಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಆದರೆ, ಐವರು ವೈದ್ಯರು ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿ ಪೇಟೆಯ ವಿವಿಧ ಸ್ಥಳಗಳಿಗೆ ಸುತ್ತಾಡಿದ್ದರು ಎನ್ನಲಾಗಿದೆ.
ಈ ವಿಚಾರವಾಗಿ ಜುಲೈ 15 ರಂದು ಡಿಸಿ ಕಚೇರಿಯಿಂದ ಜಿಪಿಎಸ್ ಆಧಾರಿತ ಮಾಹಿತಿಯನ್ನು ಪಡೆದು ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.