ಉಳ್ಳಾಲ, ಜು. 19 (DaijiworldNews/SM): ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಬಳಿ ರವಿವಾರ ಬೆಳಿಗ್ಗೆ ಸಂಭವಿಸಿದೆ.

ಚೆಂಬುಗುಡ್ಡೆ ನಿವಾಸಿಗಳಾದ ಚರಣ್ ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು. ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಎದುರು ಭಾಗದಲ್ಲಿದ್ದ ಕಾರು ಏಕಾಏಕಿ ಬಲಭಾಗಕ್ಕೆ ತಿರುಗಲು ಬ್ರೇಕ್ ಹಾಕಿದ ಪರಿಣಾಮ ಬೈಕ್ ಢಿಕ್ಕಿ ಹೊಡೆದಿದೆ.
ಇನ್ನು ಘಟನೆಗೆ ಕಾರಣನಾದ ಕಾರು ಚಾಲಕ ಮಹಮ್ಮದ್ ಅಜ್ಮಲ್ ವಿರುದ್ಧ ಪ್ರಕರಣ ದಾಖಲಾಗಿದೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಕಾಪಿಕಾಡು ಭಾಗದಲ್ಲಿ ರಾ.ಹೆದ್ದಾರಿ 66 ರನ್ನು ಅವೈಜ್ಞಾನಿಕ ರೀತಿಯಲ್ಲಿ ತೆರವು ಮಾಡಲಾಗಿದೆ. ಈ ಕುರಿತು ಈ ಹಿಂದೆಯೇ ಮಾಧ್ಯಮಗಳು ಎಚ್ಚರಿಸಿದ್ದರೂ ತೆರವು ಮುಚ್ಚಲಾಗಿಲ್ಲ. ಇದು ಅಪಘಾತವನ್ನು ಆಹ್ವಾನಿಸುತ್ತಿದೆ.