ಉಡುಪಿ, ಜು. 22 (DaijiworldNews/SM): ಜುಲೈ 23ರ ಗುರುವಾರದಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ಬಸ್ ಸಂಚಾರ ನಿಲ್ಲಿಸಿರುವುದರಿಂದ ಆಗಿರುವ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು. ಅಲ್ಲದೆ, ಗುರುವಾರದಿಂದಲೇ ಉಡುಪಿ ಜಿಲ್ಲೆಯಲ್ಲಿ ನರ್ಮ್ ಬಸ್ ಹಾಗೂ ಖಾಸಗಿ ಬಸ್ ಗಳ ಸಂಚಾರ ಆರಂಭಿಸುವಂತೆ ಸೂಚಿಸಿದರು. ಇದಕ್ಕೆ ಸಮ್ಮತಿ ದೊರಕಿದ್ದು, ಉಡುಪಿಯಲ್ಲಿ ನರ್ಮ್ ಬಸ್ಸು ಹಾಗೂ ಖಾಸಗಿ ಬಸ್ಸು ಸಂಚಾರ ಆರಂಭಗೊಳ್ಳಲಿದೆ.
ಕೊರೊನಾ ನಿಯಂತ್ರಣ ದೃಷ್ಟಿಯಿಂದ ರಾಜ್ಯದಲ್ಲಿ ಕೆಲವು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿರುವುದರಿಂದ ಉಡುಪಿ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ದಿನಂಪ್ರತಿ ಕೆಲಸಕಾರ್ಯಗಳಿಗೆ ತೆರಳುತ್ತಿರುವ ಜನಸಾಮಾನ್ಯರಿಗೆ ಸಂಕಷ್ಟ ವಾಗಿರುವುದರಿಂದ ತಕ್ಷಣದಲ್ಲಿ ಬಸ್ ಸಂಚಾರ ಆರಂಭಿಸುವಂತೆ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.