ಮಂಗಳೂರು, ಜು 23 (Daijiworld News/MSP): ಕೊರೊನಾ ಪ್ರಕರಣ ಹೆಚ್ಚಳದಿಂದ ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಅವಕಾಶ ನೀಡಲಾಗಿರುವ ಹಿನ್ನಲೆಯಲ್ಲಿ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ.

ಅಂಗಡಿ ಮುಂಗಟ್ಟುಗಳು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದೆ. ಇಂದು ಬೆಳಗ್ಗೆ ೫ ಗಂಟೆಯ ಅನಂತರ ಲಾಕ್ ಡೌನ್ ತೆರವುಗೊಂಡಿದ್ದು ಈ ಹಿಂದೆ ಅನುಮತಿ ನೀಡಿದ್ದ ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆ , ಮಾಲ್ ಗಳು, ಖಾಸಗಿ ಹಾಗೂ ಸರಕಾರಿ ಕಚೇರಿಗಳು ಕಾರ್ಯಾರಂಭಿಸಿದೆ. ಮದ್ಯ ಮಾರಾಟಕ್ಕೂ ಅನುಮತಿ ನೀಡಲಾಗಿದೆ.
ಇನ್ನು ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಖಾಸಗಿ ಹಾಗೂ ಸರ್ಕಾರಿ ಬಸ್ಸುಗಳು ಪ್ರಯಾಣಿಕರ ಸೇವೆಗಿಳಿದಿದ್ದು ಈ ಮೂಲಕ ವಿರಳವಾದರೂ ಜನಸಂಚಾರ ಆರಂಭವಾಗಿದೆ.
ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು ಕನಿಷ್ಟ ಸಿಬ್ಬಂದಿಯೊಂದಿಗೆ ಕೆಲಸ ಆರಂಭಿಸಿದೆ.