ಉಳ್ಳಾಲ, ಆ 08 (DaijiworldNews/PY): ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಮೃತಪಟ್ಟವರನ್ನು ಹರೇಕಳ ನಿವಾಸಿ ಹಮೀದ್ ಎಂಬವರ ಪುತ್ರ ಶಬೀರ್ (24) ಎನ್ನಲಾಗಿದೆ.
ಹಮೀದ್ ಅವರು ತಮ್ಮ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ಮಂಗಳೂರಿನಿಂದ ಹರೇಕಳಕ್ಕೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಶಬೀರ್ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆ ಹಚ್ಚಲು ಹುಡುಕಾಟ ಪ್ರಾರಂಭಿಸಿದ್ದಾರೆ.