ಕುಂದಾಪುರ, ಆ. 16 (DaijiworldNews/MB) : ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದು 7 ಮೀನುಗಾರರನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.







ಶೇಖರ, ನಾಗ, ಲಕ್ಷ್ಮಣ, ಮಂಜುನಾಥ ಮೃತರು.
ಸಾಗರಶ್ರೀ ಎಂಬ ಮೀನುಗಾರಿಕಾ ನಾಡದೋಣಿಯಲ್ಲಿ ಒಟ್ಟು 11ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳಿ ವಾಪಸವಾಗುತ್ತಿದ್ದ ವೇಳೆ ಕೊಡೇರಿ ಸಮೀಪ ಸಮುದ್ರದ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿತ್ತು. ನಿಯಂತ್ರಣ ಕಳೆದುಕೊಂಡ ದೋಣಿ ಕಲ್ಲಿನ ಗೋಡೆಗೆ ಢಿಕ್ಕಿ ಹೊಡೆದು ದೋಣಿ ಪಲ್ಟಿಯಾಗಿದೆ. ಪರಿಣಾಮ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಉಳಿದವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮೀನುಗಾರರು ಸಾವನ್ನಪ್ಪಿದ ಮೀನುಗಾರರ ಪತ್ತೆ ಕಾರ್ಯ ಮುಂದುವರೆದಿದೆ. ಸ್ಥಳೀಯರ ಸಹಕಾರದಿಂದ ದೋಣಿಯನ್ನು ದಡಕ್ಕೆ ತರಲಾಗುತ್ತಿದೆ.
ಸ್ಥಳಕ್ಕೆ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಹಾಗೂ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿಯವರು ಭೇಟಿ ನೀಡಿದ್ದಾರೆ.