ಮಂಗಳೂರು, ಆ. 16 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ 229 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8878 ಕ್ಕೆ ಏರಿಕೆಯಾಗಿದೆ.

ಇಂದು ಮಂಗಳೂರಿನಲ್ಲಿ 122, ಬಂಟ್ವಾಳದಲ್ಲಿ 36, ಬೆಳ್ತಂಗಡಿಯಲ್ಲಿ 8, ಪುತ್ತೂರಿನಲ್ಲಿ 31, ಸುಳ್ಯದಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 31 ಮಂದಿಗೆ ಪಾಸಿಟಿವ್ ಆಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 128 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 6445 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಮೂವರು ಮಂಗಳೂರಿನ ವರಾಗಿದ್ದು ನಾಲ್ವರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ 269 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೆಯೇ ಪ್ರಸ್ತುತ 2164 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ 123 ಐಎಲ್ಎ, 6 ಎಸ್ಎಆರ್ಐ ಪ್ರಕರಣಗಳಾಗಿದ್ದು 22 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಇನ್ನು 78 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಇನ್ನು ಇಂದು ದೃಢಪಟ್ಟ 229 ಸೋಂಕಿತರ ಪೈಕಿ 131 ಯಲ್ಲಿ ರೋಗದ ಗುಣಲಕ್ಷಣಗಳಿದ್ದು 98 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ.