ಸುಳ್ಯ, ಆ 17 (DaijiworldNews/PY): ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಂಸದರ ಆದರ್ಶ ಗ್ರಾಮ ಬಳ್ಪಕ್ಕೆ ಇಂದು ಭೇಟಿ ನೀಡಿದರು.


ಈ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆಗೈದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕಲಿಯುತ್ತಿರುವ ಬಳ್ಪ ಗ್ರಾಮದ ವಿದ್ಯಾರ್ಥಿ ಅನುಶ್ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ600 ಅಂಕ ಗಳಿಸಿದ ವಿದ್ಯಾಭೋದಿನಿ ಹೈಸ್ಕೂಲ್ ಬಾಳಿಲದಲ್ಲಿ ಕಲಿಯುತ್ತಿರುವ ಬಳ್ಪ ಗ್ರಾಮದ ವಿದ್ಯಾರ್ಥಿನಿ ಆಶಿತಾ ವಿ ಇವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.