ನೆಲ್ಯಾಡಿ, ಆ. 17 (DaijiworldNews/MB) : ಗುಂಡ್ಯ ಸಮೀಪದ ಗಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಭಾಗಶಃ ಸುಟ್ಟುಹೋಗಿರುವ ಘಟನೆ ಆಗಸ್ಟ್ 17 ರ ಸೋಮವಾರ ಬೆಳಿಗ್ಗೆ ನಡೆದಿದೆ.



ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದು ತಿಳಿದ ಕೂಡಲೇ ಚಾಲಕ ಲಾರಿ ನಿಲ್ಲಿಸಿದ್ದಾರೆ.
ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು, ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ.
ಬೆಂಕಿಯಿಂದಾಗಿ ಲಾರಿಯ ಟಯರ್ ಸುಟ್ಟುಹೋಗಿದ್ದು ಹೆಚ್ಚಿನ ಅನಾಹುತ ನಡೆದಿಲ್ಲ. ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.