ಮಂಗಳೂರು, ಆ. 21 (DaijiworldNews/HR): ಸಾರ್ವನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚಾಗ್ಚಿದು, ಆ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ತಂಡವು ಆಗಸ್ಟ್ 20 ರಂದು ಕಾರ್ಯಚರಣೆ ನಡೆಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ 2003 ಕಾಯಿದೆ ಉಲ್ಲಂಘನೆ ವಿರುದ್ಧ ಉರ್ವಸ್ಟೋರ್ ಪರಿಸರದಲ್ಲಿ ಕಾರ್ಯಚರಣೆ ನಡೆಸಿ 21 ಕೇಸ್ ದಾಖಲಿಸಿ ಸುಮಾರು ರೂ. 2100 ದಂಡ ವಿಧಿಸಿ, ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲೀಕರಿಗೆ ಮಾಹಿತಿ ನೀಡಲಾಯಿತು.
ಈ ತಂಡದಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತರಾದ ಶ್ರುತಿ ಸಾಲ್ಯಾನ್, ವಿಜಯ್ ಕುಮಾರ್, ಉರ್ವ ಸ್ಟೋರ್ ಠಾಣಾ ಪೊಲೀಸ್ ಸಿಬ್ಬಂದಿ ಪ್ರತಾಪ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.