ಮಂಗಳೂರು, ಸೆ. 08 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 374 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15452 ಕ್ಕೆ ಏರಿಕೆಯಾಗಿದೆ.

ಇಂದು ಮಂಗಳೂರಿನಲ್ಲಿ 219, ಬಂಟ್ವಾಳದಲ್ಲಿ 61, ಪುತ್ತೂರಿನಲ್ಲಿ 36, ಸುಳ್ಯದಲ್ಲಿ 6, ಬೆಳ್ತಂಗಡಿಯಲ್ಲಿ 32 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 20 ಮಂದಿಗೆ ಪಾಸಿಟಿವ್ ಆಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 232 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 11986 ಕ್ಕೆ ಏರಿದೆ.
ಜಿಲ್ಲೆಯಲ್ಲಿ ಮೂರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಒಬ್ಬರು ಪುತ್ತೂರಿನವಾದರೆ ಮತ್ತಿಬ್ಬರು ಇತರ ಜಿಲ್ಲೆಯವರಾಗಿದ್ದಾರೆ. ಈವರೆಗೆ 412 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಮಂಗಳವಾರ 236 ಐಎಲ್ಎ, 18 ಎಸ್ಎಆರ್ಐ ಪ್ರಕರಣಗಳಾಗಿದೆ. ಇನ್ನು 120 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಇನ್ನು ಇಂದು ದೃಢಪಟ್ಟ 374 ಸೋಂಕಿತರ ಪೈಕಿ 254 ಮಂದಿಯಲ್ಲಿ ರೋಗದ ಗುಣಲಕ್ಷಣಗಳಿದ್ದು 120 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಹಾಗೆಯೇ ಪ್ರಸ್ತುತ 3054 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.