ಉಡುಪಿ, ಅ 20 (DaijiworldNews/SM): ಮದ್ಯ ಸೇವನೆಗೆ ಹಣವಿಲ್ಲವೆಂದು ನೊಂದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಹೊನ್ನೆಕುಂಬ್ರಿ ಎಂಬಲ್ಲಿ ನಡೆದಿದೆ. ಇಲ್ಲಿನ ರಾಮ ನಾಯ್ಕ(50) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಇವರು ಮದ್ಯ ಸೇವಿಸುವ ಚಟಹೊಂದಿದ್ದರು. 4 ವರ್ಷದ ಹಿಂದೆ ತೆಂಗಿನ ಮರದಿಂದ ಬಿದ್ದು ಬೆನ್ನಿನ ಹಿಂಭಾಗಕ್ಕೆ ಗಾಯವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಹೊನ್ನೆಕುಂಬ್ರಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ದಿನಗಳಿಂದ ಸರಿಯಾಗಿ ಕೆಲಸವಿಲ್ಲದೇ ಶರಾಬು ಕುಡಿಯಲು ಹಣವಿಲ್ಲದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಎನೇನೂ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.
ಈ ನಡುವೆ ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದವರು. ಈ ಸಂದರ್ಭದಲ್ಲಿ ಎನೇನೋ ಮಾತನಾಡುತ್ತಿದ್ದರು. ಆದರೆ, ಇಂದು ಮುಂಜಾನೆ ಅವರು ಎದ್ದು ಮನೆಯಿಂದ ಹೊರಗೆ ಹೋದ ಬಗ್ಗೆ ತಾಯಿ ತಿಳಿಸಿದ್ದು ನಂತರ ಮನೆಯ ಪರಿಸರದಲ್ಲಿ ಹುಡುಕಾಡಿದ್ದಾರೆ.
ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆಗೆ ಹೊನ್ನೆಕುಂಬ್ರಿ ಶೀನ ನಾಯ್ಕರ ಭತ್ತದ ಗದ್ದೆಯ ಪಕ್ಕದಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.