ಉಡುಪಿ, ಅ. 29 (DaijiworldNews/MB) : ಕಾಪು ಪುರಸಭಾ ಸದಸ್ಯರಾದ ಸುರೇಶ್ ದೇವಾಡಿಗ ಅವರು ಪಕ್ಷದ ವಿಪ್ಅನ್ನು ಉಲ್ಲಂಘಿಸಿದ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷದಿಂದ ಅವರನ್ನು ಕೂಡಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ನರಸಿಂಹ ಮೂರ್ತಿಯವರು ತಿಳಿಸಿದ್ದಾರೆ.

ಕಾಪು ಪುರಸಭಾ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ಸುರೇಶ್ ದೇವಾಡಿಗ ಅವರು ಪಕ್ಷದ ವಿಪ್ ಅನ್ನು ಉಲ್ಲಂಘಿಸಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. ಈ ಹಿನ್ನಲೆಯಲ್ಲಿ ಸುರೇಶ್ ದೇವಾಡಿಗರ ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಅವರು ಪಕ್ಷದಿಂದ ಅಮಾನತು ಮಾಡಿ ಈಗಿಂದ್ದೀಗಲೇ ಕಾರ್ಯಗತಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ನರಸಿಂಹ ಮೂರ್ತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.