ಉಡುಪಿ, ಅ.31 (DaijiworldNews/PY): ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟಿಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ.









ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ. ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಮಾಯಿಸಿದ್ದರು.
ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಎಂದು ಸಂಘಟನೆಯ ಪ್ರಮುಖರು ಆಪಾದಿಸಿದ್ದಾರೆ. ಈ ಘಟನೆಗೆ ಯಾರೆಲ್ಲಾ ಕುಮ್ಮಕ್ಕು ನೀಡಿದ್ದಾರೆ ಎಲ್ಲರನ್ನೂ ತಕ್ಷಣಕ್ಕೆ ಬಂಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಮನವಿಯನ್ನು ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿ ಉಪ ಪೊಲೀಸ್ ಅಧೀಕ್ಷಕ ಜೈಶಂಕರ್ ಮಾತನಾಡಿ, "ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಸಿಸಿಟಿವಿ ಫುಟೇಜ್ ಈಗಾಗಲೇ ಲಭ್ಯವಾಗಿದ್ದು ಆರೋಪಿಯ ಚಲನವಲನಗಳ ಬಗ್ಗೆ ನಿಗಾ ಇರಿಸಲಾಗಿದೆ ಕ್ಷಣದಲ್ಲಿ ಆರೋಪಿಯನ್ನು ಬಂಧಿಸಲಾಗುವುದು. ತನಿಖೆಯ ಬಗ್ಗೆ ಈಗಾಗಲೇ ಏನೂ ಹೇಳಲು ಆಗುವುದಿಲ್ಲ. ಇದರಿಂದ ಆರೋಪಗಳಿಗೆ ಅನುಕೂಲವಾಗಬಹುದು ಆರೋಪಿಯನ್ನು ತಕ್ಷಣ ಬಂಧಿಸುವ ವಿಶ್ವಾಸ ನಮಗಿದೆ ತಮ್ಮೆಲ್ಲರ ಸಹಕಾರ ಅಗತ್ಯ" ಎಂದರು.
ಆರೋಪಿ ಬಂಧನ ಶೀಘ್ರ ಆಗದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.