ಮಂಗಳೂರು, ನ. 12 (DaijiworldNews/MB) : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದರ ವಿರುದ್ಧ ನವೆಂಬರ್ 12 ಗುರುವಾರ ಕೆಂಜಾರಿನಲ್ಲಿ ಮಾಜಿ ಶಾಸಕ ಅಭಯಚಂದ್ರ ಜೈನ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಉಪವಾಸ ಧರಣಿ ನಡೆಸಿತು.










''ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರಿನ ಬದಲಾಗಿ ತುಳುನಾಡಿನ ಸಾಧಕರ ಹೆಸರನ್ನು ಇಡಬೇಕು ಹಾಗೂ ವಿಮಾನ ನಿಲ್ದಾಣದಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ನೀಡಬೇಕು'' ಎಂದು ಜಿಲ್ಲಾ ಕಾಂಗ್ರೆಸ್ ಈ ಉಪವಾಸ ಪ್ರತಿಭಟನೆಯ ಸಂದರ್ಭ ಒತ್ತಾಯಿಸಿದೆ.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಕೂಡಾ ಭಾಗವಹಿಸಿದ್ದಾರೆ.
ಮಾಜಿ ಶಾಸಕ ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ ಈ ಉಪವಾಸ ಪ್ರತಿಭಟನೆ ನಡೆದಿದ್ದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.