ವಿಟ್ಲ, ಡಿ.11 (DaijiworldNews/HR): ವಿಟ್ಲ ಸಮೀಪದ ಕರೋಪಾಡಿ ಗ್ರಾಮದ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತಪಟ್ಟವರನ್ನುಚಂದಪ್ಪ ಮೂಲ್ಯ ಎಂದು ಗುರುತಿಸಲಾಗಿದೆ.
ರಾತ್ರಿಯ ಬಳಿಕ ಗುಡುಗು ಸಿಡಿಲು ಇದ್ದು, ಈ ಸಂದರ್ಭ ಮನೆಗೆ ಸಿಡಿಲು ಬಡಿದಿದೆ, ಸುಮಾರು 12.30ರ ಬಳಿಕ ಘಟನೆ ನಡೆದಿದ್ದು, ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇದೇ ಸಂದರ್ಭ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿ ವಿದ್ಯುತ್ ಉಪಕರಣಗಳು ಸುಟ್ಟುಹೋಗಿದ್ದು ,ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.