ಬಂಟ್ವಾಳ, ಡಿ.13 (DaijiworldNews/HR): ಗ್ರಾ.ಪಂ.ಚುನಾವಣೆಯನ್ನು ಬಹಿಷ್ಕಾರ ಹಾಕಿ ರಸ್ತೆಯಲ್ಲಿ ಸಜೀಪ ಮುನ್ನೂರು ಗ್ರಾಮದ ಗ್ರಾಮಸ್ಥರು ಬ್ಯಾನರ್ ಹಾಕಿದ ಪ್ರಸಂಗ ಶನಿವಾರ ನಂದಾವರದಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ನಂದಾವರ ದೇವಸ್ಥಾನದ ಸಮೀಪ ಅರಮನೆ ಹಿತ್ಲು ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದನ್ನು ಹಾಕಿದ್ದಾರೆ.
2020 -21 ಸಾಲಿನ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಸಜೀಪ ಮುನ್ನೂರು ಗ್ರಾಮದ ನಂದಾವರ ಅರಮನೆ ಹಿತ್ಲುವಿನ ಸಾರ್ವಜನಿಕರು ಒಗ್ಗಟ್ಟಿನಿಂದ ಬಹಿಷ್ಕರಿಸುತ್ತೇವೆ. ನಂದಾವರದಿಂದ ಅರಮನೆಹಿತ್ಲುವಿಗೆ ಸಂಪರ್ಕಿಸುವ ರಸ್ತೆಗೆ ಸರಕಾರದಿಂದ ಅನುದಾನ ದೊರೆತರೂ ಸಹ ಸ್ಥಳೀಯ ರಾಜಕಾರಣಿಗಳ ಬೇಜವಾಬ್ದಾರಿಯಿಂದ ಯಾವುದೇ ಕೆಲಸ ನಡೆಯದ ಕಾರಣ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆ ಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.
ಇನ್ನು ಯಾವುದೇ ಪಕ್ಷದ ರಾಜಕೀಯ ಪ್ರೇರಿತ ವ್ಯಕ್ತಿಗೆ ಒಳಗೆ ಬರಲು ಅವಕಾಶವಿರುವುದಿಲ್ಲ ಎಂದು ಬರೆಯಲಾಗಿದೆ.