ಶಿರ್ವ, ಜ 13 (DaijiworldNews/SM): ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರು ಬಾವಿಯಲ್ಲಿ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 69 ವರ್ಷ ಪ್ರಾಯದ ಜಾನ್ ಡಿಸೋಜ ಮೃತಪಟ್ಟವರು.

ಜಾನ್ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಆದರೆ, ಬೆಳಿಗ್ಗೆ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಮನೆಯ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಲ್ಪೆಯ ಈಜು ತಜ್ಞ ಈಶ್ವರ್ ಬಾವಿಯಲ್ಲಿ ಮುಳುಗಿ ಶವ ಮೇಲೆ ತರಲು ಸಹಕರಿಸಿದ್ದಾರೆ.
ಶಿರ್ವ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸ್ ತನಿಖೆ ಮುಂದುವರೆದಿದೆ.