ಮಂಗಳೂರು, ಜ.16 (DaijiworldNews/HR): ಕರಾವಳಿ ಕರ್ನಾಟಕ ಮತ್ತು ಗೋವಾದ ವಿವಿಧ ದೇವಾಲಯಗಳಲ್ಲಿ ಸಂಭವಿಸಿದ ಹಲವಾರು ಪಿಕ್ಪಾಕೆಟಿಂಗ್ಗೆ ಸಂಬಂಧಿಸಿದಂತೆ ನಾಲ್ಕು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸುವಲ್ಲಿ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರು ಜನರಲ್ಲಿ ನಾಲ್ಕು ಮಹಿಳೆಯರು ಸೇರಿದ್ದು, ಕರಾವಳಿ ಕರ್ನಾಟಕ ಮತ್ತು ಗೋವಾದ ದೇವಾಲಯಗಳಲ್ಲಿ ಹಲವಾರು ಪಿಕ್ಪಾಕೆಟಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಅವರ ಮೇಲಿದೆ.
ಜನವರಿ 12 ರಂದು ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಯಶೋದ ಗೌಡರ ಪರ್ಸನ್ನು ನಾಲ್ವರು ಮಹಿಳೆಯರು ಮತ್ತು ಇಬ್ಬರು ಯುವಕರು ಕದ್ದಿದ್ದಾರೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.
ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಯಮುನಪ್ಪ ಮುತ್ತಪ್ಪ ಚಲವಾಡಿ (55), ಪ್ರಕಾಶ್ ಚೆನ್ನಪ್ಪ (26), ಶೋಭಾ ಮುತ್ತಾಗರ್ (40), ಕುಮಾರಮ್ಮ ಮಾರುತಿ ಮುತ್ತಾಗರ್ (45), ಶಾಂತಮ್ಮ ಮುತ್ತಾಗರ್ (55), ಮತ್ತು ಚಂದ್ರಶೇಖರ್ ಶಿವರೆದಪ್ಪ (49) ಎಂಬವರನ್ನು ಬಂಧಿಸಿದ್ದಾರೆ. ಏಳು ಮೊಬೈಲ್ ಫೋನ್ಗಳು, 21,540 ರೂ. ನಗದು, ಮತ್ತು ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಆರೋಪಿಗಳು, ಗೋವಾ, ಗೋಕರ್ಣ, ಮುರುಡೇಶ್ವರ, ಕೊಲ್ಲೂರು, ಶೃಂಗೇರಿ, ಕಟೀಲು ಮತ್ತು ಇತರ ಪ್ರಮುಖ ದೇವಾಲಯಗಳಲ್ಲಿನ ಕಳ್ಳತನ ನಡೆಸುತ್ತಿದ್ದಾರೆ ಎಂದು ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.